ಕಡಬ; ಸರ್ಕಾರಿ ಶಾಲೆಯಲ್ಲಿ RSS ಬೈಠಕ್ ಆರೋಪ: ವ್ಯಾಪಕ ಆಕ್ರೋಶ

Prasthutha|

ಕಡಬ: ತಾಲೂಕಿನ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಬೈಠಕ್, ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -


ಸರಕಾರಿ ಶಾಲೆಯ ಆವರಣದೊಳಗೆ ಅಥವಾ ಮೈದಾನವನ್ನು ಕೂಡಾ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಕೊಡಬಾರದೆಂಬ ಸುತ್ತೋಲೆ ಇರುವಾಗ ಶಾಲೆಯ ಒಳಗೆಯೇ RSS ಕಾರ್ಯಕ್ರಮವನ್ನು ಮಾಡಲು ಅವಕಾಶ ಕೊಟ್ಟದ್ದು ಹೇಗೆ ಎಂದು ಸ್ಥಳೀಯ ಕೆಲವರು ಶಿಕ್ಷಣ ಇಲಾಖೆಗೆ ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನೆ ಮಾಡಿದ್ದಾರೆ. ಶಿಕ್ಷಣ ಇಲಾಖೆಯಿಂದ ಶಾಲಾ ಮುಖ್ಯೋಪಾಧ್ಯಾಯರಿಗೆ ಬುಲಾವ್ ಹೋಗಿ ಅವರಿಂದ ವಿವರಣೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.


ಸರ್ಕಾರಿ ಶಾಲೆಯಲ್ಲಿ RSS ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.



Join Whatsapp