ಕಡಬ | ಯುವಕನಿಗೆ ಚೂರಿ ಇರಿದ ಪ್ರಕರಣ: ಓರ್ವನ ಬಂಧನ

Prasthutha|

ಕಡಬ: ಆತೂರಿನಲ್ಲಿ ಇತ್ತಂಡಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ಉಂಟಾಗಿ ಯುವಕನೊಬ್ಬನಿಗೆ ಚೂರಿ ಇರಿದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಯನ್ನು ನೌಫಲ್ (29) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ನವಾಝ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ.


ನವಾಝ್ ಎಂಬಾತ ಸೋಮವಾರ ಸಂಜೆ ನೌಫಲ್ ನ ಅಂಗಡಿಗೆ ಮೊಬೈಲ್ ರಿಚಾರ್ಜ್ ಮಾಡಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.



Join Whatsapp