ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಯುವಕನ ಹತ್ಯೆ; ಆರೋಪ

Prasthutha|

ಕಲಬುರಗಿ: ಯುವಕನನ್ನು ಹತ್ಯೆ ಮಾಡಿದ ಘಟನೆ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಹತ್ಯೆಯಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -


ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ.


ದುಷ್ಕರ್ಮಿಗಳು ಜಾವೀದ್ ರನ್ನು ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp