Home ಟಾಪ್ ಸುದ್ದಿಗಳು ಕಳಸಾ ಬಂಡೂರಿ ವಿಸ್ತೃತಯೋಜನೆಗೆ  ಒಪ್ಪಿಗೆ; ಕನ್ನಡಿಗರ ಹೋರಾಟಕ್ಕೆ ದೊರೆತ ಫಲ: ಎಚ್‌ಡಿ. ಕುಮಾರಸ್ವಾಮಿ

ಕಳಸಾ ಬಂಡೂರಿ ವಿಸ್ತೃತಯೋಜನೆಗೆ  ಒಪ್ಪಿಗೆ; ಕನ್ನಡಿಗರ ಹೋರಾಟಕ್ಕೆ ದೊರೆತ ಫಲ: ಎಚ್‌ಡಿ. ಕುಮಾರಸ್ವಾಮಿ

ಬೆಂಗಳೂರು: ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಹೋರಾಟಕ್ಕೆ ಸಂದ ಜಯ ಇದು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸಂಸತ್ತಿನ ಒಳಗೆ, ಹೊರಗೆ ದೊಡ್ಡ ಸಂಘರ್ಷವನ್ನೇ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ಹೇಳಿದರು.

Join Whatsapp
Exit mobile version