ಕಳಸ: ಕರಡಿ ದಾಳಿ; ಕಾರ್ಮಿಕ ಗಂಭೀರ

Prasthutha|

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಕಳಸ ತಾಲೂಕಿನ ಕುದುರೆಮುಖ ಸಮೀಪದ ಬಿಳಗಲ್‍ನ ಕಾಫಿತೋಟದಲ್ಲಿ ನಡೆದಿದೆ.

- Advertisement -

ಕರಡಿ ದಾಳಿಗೊಳಗಾದ ಕೂಲಿ ಕಾರ್ಮಿಕನನ್ನು ಬೆಳ್ಳಪ್ಪ ಎಂದು ಗುರುತಿಸಲಾಗಿದೆ. ಕಾರ್ಮಿಕ ಬೆಳ್ಳಪ್ಪ ತೋಟದಲ್ಲಿ ಕೆಲಸ ಮಾಡುವ ವೇಳೆ ಮರಿಗಳೊಂದಿಗೆ ತೋಟಕ್ಕೆ ಬಂದ ಕರಡಿ ಏಕಾಏಕಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ಬೆಳ್ಳಪ್ಪನವರ ಒಂದು ಕಾಲು ಗಂಭೀರ ಗಾಯವಾಗಿದೆ. ಮಂಡಿಯಿಂದ ಕೆಳಬಾಗದಲ್ಲಿ ಮಾಂಸಖಂಡಗಳನ್ನ ಸಂಪೂರ್ಣವಾಗಿ ಕಿತ್ತು ಹಾಕಿದೆ. ಕೂಡಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅವರನ್ನು ಕಳಸ ತಾಲೂಕು ಆಸ್ಪತ್ರೆ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp