ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಳಿಚರಣ್ ಬಂಧನ!

Prasthutha|

ಥಾಣೆ: ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಬುಧವಾರ ರಾತ್ರಿ ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಬಂಧಿಸಲಾಗಿದ್ದು, ಇಂಥಹದ್ದೇ ಪ್ರಕರಣವೊಂದರಲ್ಲಿ ಅವರು ಈ ಹಿಂದೆ ಜೈಲು ಸೇರಿದ್ದರು. ಟ್ರಾನ್ಸಿಟ್ ರಿಮ್ಯಾಂಡ್ ಆಧಾರದಲ್ಲಿ ಕಾಳಿಚರಣ್ ಮಹಾರಾಜ್ ನ್ನು ಥಾಣೆಗೆ ಕರೆದುಕೊಂಡು ಬರಲಾಗಿದ್ದು ಇಂದು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ ಎಂದು ನೌಪಾಡ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

2021 ರ ಡಿ.26 ರಂದು ಛತ್ತೀಸ್ ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಳಿಚರಣ್ ಮಹಾರಾಜ್ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನು. ಇದೇ ಪ್ರಕರಣದಲ್ಲಿ ಆತನನ್ನು ಬಂಧಿಸಿ ಛತ್ತೀಸ್ ಗಢದ ಜೈಲಿನಲ್ಲಿರಿಸಲಾಗಿತ್ತು. ಮಹಾರಾಷ್ಟ್ರದಲ್ಲಿಯೂ ಜ.12 ರಂದು ವಾರ್ಧ ಪೊಲೀಸರು ಈತನ ವಿರುದ್ಧ ಇಂಥದ್ದೇ ಪ್ರಕರಣ ದಾಖಲಿಸಿದ್ದರು.

Join Whatsapp