ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಬಂಧಿಸುವುದಿಲ್ಲ: ಕೋರ್ಟ್‌ಗೆ ತಿಳಿಸಿದ ಸರಕಾರಿ ವಕೀಲ

Prasthutha|

ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ರನ್ನು ನಾವು ಬಂಧಿಸುವುದಿಲ್ಲ ಎಂದು ಸರಕಾರದ ಪರವಾಗಿ ಹಾಜರಿದ್ದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಪ್ರಭಾಕರ ಭಟ್, ಮೊಕದ್ದಮೆ ರದ್ದತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಪ್ರಭಾಕರ್ ಭಟ್ ಪರ ವಕೀಲರು ಮತ್ತು ದೂರುದಾರರ ಪರವಾದ ವಕೀಲರು ವಾದ ಮಂಡಿಸಿದ್ದು, ಈ ಸಂದರ್ಭ ಸರಕಾರದ ಪರವಾಗಿ ಹಾಜರಿದ್ದ ವಕೀಲರು, “ಈ ಪ್ರಕರಣದಲ್ಲಿ ನಾವು ಪ್ರಭಾಕರ ಭಟ್ಟರನ್ನು ಬಂಧಿಸಲ್ಲ. ಹಾಗಾಗಿ ವಿಚಾರಣೆಗೆ ಮುಂದಿನ ದಿನಾಂಕ ಕೊಡಿ” ಎಂದು ನ್ಯಾಯಾಲಯದ ಗಮನ ಸೆಳೆದಿದ್ದರು. ಕೂಡಲೇ ನ್ಯಾಯಾಧೀಶರು, ಸರ್ಕಾರವೇ ಆರೋಪಿಯನ್ನು ಬಂಧಿಸಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದೆ. ಹಾಗಾಗಿ ಈ ಪ್ರಕರಣದಲ್ಲಿ ತಡೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.

ಇಂದು ವಿಚಾರಣೆ ವೇಳೆ ಭಟ್ ಪರ ವಕೀಲರು, ಇದು ರಾಜಕೀಯ ಪ್ರೇರಿತ ದೂರು, ಆರೋಪಿ ವಯೋ ವೃದ್ಧರಾಗಿದ್ದು, ಅನಾರೋಗ್ಯದಿಂದಲೂ ಬಳಲುತ್ತಿದ್ದಾರೆ. ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹಾಗಾಗಿ ಎಫ್‌ಐಆರ್‌‌ಗೆ ತಡೆ ನೀಡಬೇಕು ಎಂದು ವಾದ ಮಂಡಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರರ ಪರ ವಕೀಲ ಎಸ್ ಬಾಲನ್, ಆರೋಪಿಯ ಹೇಳಿಕೆಯನ್ನು ನ್ಯಾಯಾಲಯ ಗಮನಿಸಬೇಕು. ಮುಸ್ಲಿಂ ಮಹಿಳೆಯರಿಗೆ ಒಬ್ಬ ಗಂಡ ಅಲ್ಲ, ದಿನಕ್ಕೊಬ್ಬ ಗಂಡಂದಿರು ಎಂದಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದೆ. ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿದೆ. ಆರೋಪಿ ಈ ಹಿಂದೆಯೂ ಇಂತಹ ಕೃತ್ಯ ಮಾಡಿದ್ದಾನೆ. ಹಾಗಾಗಿ ಕಾನೂನು ಅದರ ಕೆಲಸ ಮಾಡಲಿ ಎಂದು ವಾದಿಸಿದರು.
ಈ ವೇಳೆ ಭಟ್ ಪರ ವಕೀಲರು,
ಮುಂದಿನ ದಿನಾಂಕದ ವರೆಗೆ ಬಂಧಿಸದಂತೆ ನಿರ್ದೇಶನ ಕೊಡಿ, ಪ್ರಭಾಕರ ಭಟ್ ವಿರುದ್ಧ ಸರ್ಕಾರ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

- Advertisement -

ವಾದ ಮಂಡಿಸಿದ ದೂರುದಾರರ ಪರ ವಕೀಲ ಎಸ್ ಬಾಲನ್, “ಆರೋಪಿ ಪ್ರಭಾಕರ ಭಟ್ ವಿರುದ್ಧ ರೌಡಿಶೀಟ್ ಮಾತ್ರವಲ್ಲ, ಯುಎಪಿಎ ಸೇರಿದಂತೆ ದೇಶದ್ರೋಹದ ಕೇಸ್ ಹಾಕಬೇಕು. ಸಮಾಜದಲ್ಲಿ ಭಯವನ್ನು ಉತ್ಪಾದಿಸುವ ಭಯೋತ್ಪಾದಕರು ಇವರು. ಸುಪ್ರಿಂ ಕೋರ್ಟ್ ಈ ರೀತಿ ದ್ವೇಷಭಾಷಣ ಮಾಡುವವರ ವಿರುದ್ಧ ಹಲವು ತೀರ್ಪು ಕೊಟ್ಟಿದೆ. ಈಗ ಆರೋಪಿ ಬಗ್ಗೆ ಇನ್ನಷ್ಟು ತನಿಖೆ ಆಗಬೇಕಿದೆ. ಪೊಲೀಸರು ಹಾಕಿರುವ ಎಲ್ಲಾ ಸೆಕ್ಷನ್‌ಗಳು ಸರಿಯಾಗಿವೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಇದರ ಹಿಂದೆ ಕೋಮುಗಲಭೆಯ ಹುನ್ನಾರ ಇದೆ. ಹಾಗಾಗಿ ಇದು ಸರಳ ಪ್ರಕರಣ ಅಲ್ಲ ಎಂದು ಪ್ರಕರಣದ ಗಂಭೀರತೆಯ ಬಗ್ಗೆ ಗಮನ ಸೆಳೆದರು.
ದೂರುದಾರರ ಪರ ವಕೀಲ ಬಾಲನ್, ಆರೋಪಿಯನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯ ಇದೆ. ಆರೋಪಿ ಕೋಮುಗಲಭೆ ಮಾಡುವ ಹುನ್ನಾರ ಹೊಂದಿದ್ದಾನೆ ಎಂದಿದ್ದಾರೆ. ಕೊನೆಗೆ ಸರಕಾರದ ಪರ ವಕೀಲರ ಹೇಳಿಕೆ ಪ್ರಭಾಕರ ಭಟ್‌ಗೆ ಅನುಕೂಲವಾಗಿದೆ ಎಂದು ವರದಿಯಾಗಿದೆ.

Join Whatsapp