ಈಶ್ವರಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್

Prasthutha|

ಬೆಂಗಳೂರು, ಜು.31: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾಜಿ ಸಚಿವ ಹಾಗೂ ಮುಂದಿನ ಸಂಪುಟದಲ್ಲಿ ಸಚಿವಾಕಾಂಕ್ಷಿಯೂ ಆಗಿರುವ ಕೆ. ಎಸ್. ಈಶ್ವರಪ್ಪರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

- Advertisement -


ಮಠಾಧೀಶರು, ಕುರುಬರ ಸಂಘದ ಮೂಲಕ ಸಚಿವ ಸ್ಥಾನಕ್ಕೆ ಒತ್ತಡ ಹೇರುವ ಪ್ರಯತ್ನ ಮಾಡಿರುವ ಈಶ್ವರಪ್ಪ ಅವರ ಜೊತೆ ಕಲ್ಲಡ್ಕ ಭಟ್ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ. ಯಡಿಯೂರಪ್ಪ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮೂಲಕ ಹೈಕಮಾಂಡ್ ಗೆ ಒತ್ತಡ ಹೇರುವ ಪ್ರಯತ್ನ ನಡೆಸಿರುವ ಈಶ್ವರಪ್ಪ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ಸೇರುವ ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.


ಬೊಮ್ಮಾಯಿ ಅವರ ಸಂಪುಟದಲ್ಲಿ ಹಿರಿಯರನ್ನು ಹೊರಗಿಟ್ಟು ಯುವಕರಿಗೆ ಆದ್ಯತೆ ನೀಡಲು ಆರ್ ಎಸ್ ಎಸ್ ಚಿಂತನೆ ನಡೆಸಿದೆ, ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರಿಗೆ ಮನವರಿಕೆ ಮಾಡಿಕೊಡಲು ಭಟ್ ಅವರನ್ನು ಆರ್ ಎಸ್ ಎಸ್ ಕಳುಹಿಸಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

Join Whatsapp