ಕಂಬಳ ಓಟಗಾರ ಶ್ರೀನಿವಾಸ ಗೌಡಗೆ ಜೀವ ಬೆದರಿಕೆ| ಶ್ರೀರಾಮ ಸೇನೆ ಕಾರ್ಯಕರ್ತ ಪ್ರಶಾಂತ್ ಬಂಗೇರ ಬಂಧನ

Prasthutha|

ಮೂಡಬಿದಿರೆ: ‘ಕರ್ನಾಟಕ ಕ್ರೀಡಾ ರತ್ನ’ ಪುರಸ್ಕೃತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತ ಪ್ರಶಾಂತ್ ಬಂಗೇರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಶ್ರೀನಿವಾಸ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಶಾಂತ್ ಬಂಗೇರ ಮಂಗಳೂರಿನಲ್ಲಿರುವ ರಿಯಲ್ ಎಸ್ಟೇಟೊಂದರ ಕಚೇರಿಗೆ ಆಹ್ವಾನಿಸಿದ್ದು, ಮಂಗಳೂರಿಗೆ ಭೇಟಿ ನೀಡಲು ನನಗೆ ಸದ್ಯಕ್ಕೆ ಅಸಾಧ್ಯ ಎಂದ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ ಹಾಕಿದ್ದಾನೆ.

ಈ ಸಂಬಂಧ ಶ್ರೀನಿವಾಸ ಗೌಡ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Join Whatsapp