ಮಡಿಕೇರಿ: ಕನ್ನಡಕ್ಕಾಗಿ ನಾವು ಅಭಿಯಾನ | ಮಾಲ್ದಾರೆಯಲ್ಲಿ ಜಾಗೃತಿ ಕಾರ್ಯಕ್ರಮ

Prasthutha|

ಮಡಿಕೇರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಗು ಜಿಲ್ಲಾ ವತಿಯಿಂದ ಕನ್ನಡಕ್ಕಾಗಿ ನಾವು ಅಭಿಯಾನದ ಭಾಗವಾಗಿ ಮಾಲ್ದಾರೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಬೀದಿ ನಾಟಕದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಮಾಲ್ದಾರೆ ಶಾಲಾ ಆವರಣದಲ್ಲಿ ನಡೆಸಲಾಯಿತು.

- Advertisement -

ಕಾರ್ಯಕ್ರಮಕ್ಕೆ ಮಾಲ್ದಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಮೀರ್ ಮತ್ತು ಶಾಲಾ ಮುಖ್ಯ ಶಿಕ್ಷಕ ವಿಜಯ ಕುಮಾರ್ ಕಂಜರ ನುಡಿಸಿ ಚಾಲನೆಯನ್ನು ನೀಡಿದರು. ಕೊಡಗು ಜಿಲ್ಲಾ ಕಲಾ ವೇದಿಕೆಯ ರಾಜು ಮಾತನಾಡಿ ಕನ್ನಡವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಪ್ರತಿಯೊಬ್ಬರೂ ಕನ್ನಡ ಮಾತನಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಶಾಲಾ ಶಿಕ್ಷಕರಾದ ಈಶ್ವರಿ, ಪ್ರತಿಮಾ, ಸೋನಿ, ಅಮರಯ್ಯಾ, ಪ್ರಸನ್ನ ಸೇರಿ ಮತ್ತಿತರು ಉಪಸ್ಥಿತರಿದ್ದರು.

Join Whatsapp