ನ.13 ರಂದು SDPI ವತಿಯಿಂದ ಕನ್ನಡ ರಾಜ್ಯೋತ್ಸವ; ಸಾಧಕರಿಗೆ ಸನ್ಮಾನ

Prasthutha|

ಮೈಸೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ (ಮೈಸೂರು ಜಿಲ್ಲಾ ಸಮಿತಿ) ವತಿಯಿಂದ ನ.13 ರಂದು ‘ಕರ್ನಾಟಕ  ರಾಜ್ಯೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮೈಸೂರು ಜಿಲ್ಲಾ ಸಮಿತಿಯು ತಿಳಿಸಿದೆ.

- Advertisement -

13-11-2022 ಭಾನುವಾರ ಸಂಜೆ 6.30ಕ್ಕೆ ಮೈಸೂರು ಎನ್.ಆರ್.ಮೊಹಲ್ಲಾ ಮಾರುತಿ ಸರ್ಕಲ್ ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನಾಡು ನುಡಿಗೆ ಸೇವೆ ಸಲ್ಲಿಸಿದ ಹಲವಾರು ಸಾಧಕರನ್ನು ಗುರುತಿಸಿ ಪಕ್ಷದ ವತಿಯಿಂದ ಗೌರವ ಸಮರ್ಪಣೆ ಮಾಡಲಾಗುವುದು. ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಅಬ್ದುಲ್ ಮಜೀದ್, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯಾ,ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್, ಪ್ರೊ. ಮಹೇಶ್ ಚಂದ್ರ ಗುರು, ಅವರು ಸೇರಿದಂತೆ ಹಲವಾರು ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಿತಿಯು ಪ್ರಕಟಣೆಯಲ್ಲಿ ಹೇಳಿಕೆ ನೀಡಿದೆ.  

Join Whatsapp