ರೋಹಿತ್ ಚಕ್ರತೀರ್ಥನನ್ನು ಹೊರದಬ್ಬಿದ ಕನ್ನಡ ಸಾಹಿತ್ಯ ಪರಿಷತ್

Prasthutha|

ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ತಕ್ಷಣವೇ ಸದಸ್ಯತ್ವದಿಂದ ಅಮಾನತುಗೊಳಿಸಲು ಬೆಂಗಳೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

- Advertisement -


ಕುವೆಂಪು ಹಾಗೂ ರಾಜ್ಯಗೀತೆ ಕುರಿತು ರೋಹಿತ್ ಮಾಡಿರುವ ಹೇಳಿಕೆ ಅವಹೇಳನಕಾರಿಯಾಗಿದ್ದು, ಕನ್ನಡ ಪರ ಹೋರಾಟಗಾರರು ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಚಾಮರಾಜಪೇಟೆಯಲ್ಲಿ ನಡೆದ ಪರಿಷತ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಜಿಲ್ಲಾಧ್ಯಕ್ಷ ಪ್ರಕಾಶ್ ಮೂರ್ತಿ ವಹಿಸಿದ್ದರು.



Join Whatsapp