ಸಿಎಎ ವಿರೋಧಿ ಹೋರಾಟದ ವೇಳೆ ಗುಂಡು ಹಾರಾಟ ಮಾಡಿದ್ದ ಕಪಿಲ್ ಗುಜ್ಜರ್ ಬಿಜೆಪಿಗೆ ಸೇರ್ಪಡೆ

Prasthutha|

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ದೆಹಲಿಯ ಶಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆದಿದ್ದ ವೇಳೆ ಮೂರು ಸುತ್ತು ಗುಂಡು ಹಾರಿಸಿ ಭಯೋತ್ಪಾದನಾ ವಾತಾವರಣ ಸೃಷ್ಟಿಸಿದ್ದ ಕಪಿಲ್ ಗುಜ್ಜರ್ ಈಗ ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾನೆ.

- Advertisement -

ಉತ್ತರ ಪ್ರದೇಶದ ಘಾಝಿಯಾಬಾದ್ ನಲ್ಲಿ ಸ್ಥಳೀಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಪಿಲ್ ಗುಜ್ಜರ್ ಬಿಜೆಪಿ ಸೇರ್ಪಡೆಯಾಗಿದ್ದಾನೆ.

ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಗುಜ್ಜರ್, ಬಿಜೆಪಿ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದೆ ಮತ್ತು ತಾನು ಪಕ್ಷವನ್ನು ಪ್ರತಿ ಹೆಜ್ಜೆಯಲ್ಲೂ ಬೆಂಬಲಿಸುವುದಾಗಿ ಹೇಳಿದ್ದಾನೆ.

- Advertisement -

ಶಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಫೆ.1ರಂದು ಗುಜ್ಜರ್ ಗುಂಡು ಹಾರಾಟ ನಡೆಸಿದ್ದ. ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಬಳಿಕ ಆತನಿಗೆ ದೆಹಲಿ ನ್ಯಾಯಾಲಯ 25,000 ರೂ. ಬಾಂಡ್ ಮೂಲಕ ಜಾಮೀನು ನೀಡಿದೆ.  

Join Whatsapp