ಒನಕೆ ಓಬವ್ವ ಜಯಂತಿ ದಿಢೀರ್ ಮುಂದೂಡಿಕೆ

Prasthutha|

ಬೆಂಗಳೂರು: ರಾಜ್ಯಾದ್ಯಂತ ನ.11ರಂದು ಆಚರಣೆ ಆಗಬೇಕಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವು ದಿಢೀರ್ ಮುಂದೂಡಲ್ಪಟ್ಟಿದೆ.

- Advertisement -

‘ನ.11ರಂದು  ಜಯಂತಿಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಲು ಆದೇಶಿಸಿತ್ತು. ಆದರೆ ಸರ್ಕಾರದ ಆದೇಶದ ಬೆನ್ನಿಗೆ ವಿಧಾನಪರಿಷತ್‌ ಚುನಾವಣೆ ಘೋಷಣೆಯಾಗಿದ್ದರಿಂದ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ, ಗುರುವಾರ ನಡೆಯಬೇಕಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಪರಿಷ್ಕೃತ ಆದೇಶ ಹೊರಡಿಸಿದೆ. 

ಡಿಸೆಂಬರ್ 10ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, 14ರಂದು ಮತ ಎಣಿಕೆ ನಡೆಯಲಿದೆ. ಒನಕೆ ಓಬವ್ವ ಅವರ ಗೌರವಾರ್ಥ ನವೆಂಬರ್ 11ನೇ ತಾರೀಕನ್ನು ಒನಕೆ ಓಬವ್ವ ಜಯಂತಿ ಎಂದು ಸರ್ಕಾರ ನಿನ್ನೆಯಷ್ಟೇ ಘೋಷಣೆ ಮಾಡಿತ್ತು.

Join Whatsapp