ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಗೆಳೆಯನಿಗೆ ಚೂರಿ ಇರಿತ

Prasthutha|

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚೂರಿ ಇರಿದು ಹಲ್ಲೆಗೈದಿರುವ ಘಟನೆ ಕಾರ್ಕಳದ ಮಾಳ ಗ್ರಾಮದ ಹಳೆಪಳ್ಳಿ ಎಂಬಲ್ಲಿ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಗರಾಜ್ ಪೂಜಾರಿ ಎಂದು ಗುರುತಿಸಲಾಗಿದೆ.

- Advertisement -

ನಾಗರಾಜ್ ಅವರು ಹಳೆಪಳ್ಳಿಯಲ್ಲಿರುವ ತನ್ನ ಅಣ್ಣನ ಮಗ ಸಂತೋಷ್ ರವರ ಮನೆಯಲ್ಲಿ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಬಾಳೆಹೊನ್ನೂರು ನಿವಾಸಿ ಭರತ್ ಎಂಬಾತನೊಂದಿಗೆ ಮಾತನಾಡುತ್ತಿದ್ದರು. ಈ  ವೇಳೆ ಭರತ್ ನ ಕೈಯಲ್ಲಿ ಚೂರಿಯನ್ನು ಕಂಡ ನಾಗರಾಜ್ ಚೂರಿಯನ್ನು ಕೈಯಲ್ಲಿ ಹಿಡಿದುಕೊಳ್ಳಬೇಡ ಎಂದು ತಿಳಿ ಹೇಳಿದ್ದರು.

ಈ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು  ಭರತ್ ತನ್ನ ಕೈಯಲ್ಲಿದ್ದ ಚೂರಿಯಿಂದ ನಾಗರಾಜ್ ಅವರ ಹೊಟ್ಟೆಯ ಬಲಭಾಗಕ್ಕೆ ಇರಿದಿದ್ದಾನೆ.ಕೂಡಲೇ ನಾಗರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಆರಂಭದಲ್ಲಿ ಸ್ನೇಹಿತ ಎಂಬ ಕಾರಣಕ್ಕೆ ದೂರು ನೀಡದಿದ್ದರೂ ನಂತರ ಆರೋಪಿ ಭರತ್ ವಿರುದ್ಧ ದೂರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

Join Whatsapp