ಕಾರ್ಕಳ | ವೇಶ್ಯಾವಾಟಿಕೆ ದಂಧೆ ಪ್ರಕರಣ: 3ನೇ ಆರೋಪಿ ಶಾಲಾ ಶಿಕ್ಷಕಿ!

Prasthutha|

ಕಾರ್ಕಳ: ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಮೂರನೇ ಆರೋಪಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಎಂಬ ಅಘಾತಕಾರಿ ಮಾಹಿತಿ ಹೊರಬಿದ್ದಿದೆ.

- Advertisement -

ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಪ್ರಭಾರ ಎಎಸ್‌ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡವರು ಸೆಪ್ಟೆಂಬರ್ 8 ರಂದು ದಿಢೀರ್ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ಕೃತ್ಯ ಬೆಳಕಿಗೆ ಬಂದಿದೆ.

ದಾಳಿ ವೇಳೆ ಸಂತ್ರಸ್ತೆಯೋರ್ವಳನ್ನು ರಕ್ಷಿಸಲಾಗಿದೆ.

- Advertisement -

1ನೇ ಆರೋಪಿ ಭರತ್ ಜೈನ್ ನಾರಾವಿ ಅಲಿಯಾಸ್ ಭರತ್ ಶೆಟ್ಟಿ, 2ನೇ ಆರೋಪಿ ಉಳ್ಳಾಲದ ಸಂಪತ್ ಈತ ಯುವತಿ, ಮಹಿಳೆಯರನ್ನು ತನ್ನ ಗಾಳಕ್ಕೆ ಬಳಸಿ ಪುರುಷರಿಗೆ ಸರಬರಾಜು ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ. 3ನೇ ಆರೋಪಿ ಈದು ಪ್ರಮೀಳಾ ವಿಜಯಕುಮಾರ್ ಜೈನ್ ಆಗಿದ್ದಾಳೆ. ಈಕೆ ಹೊಸ್ಮಾರು ಸರಕಾರಿ ಶಾಲೆಯೊಂದರಲ್ಲಿ ಶಿಕ್ಷಕಿ ಎಂದು ತಿಳಿದು ಬಂದಿದೆ.

ಈ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದಲ್ಲಿ ಇತರರು ಭಾಗಿಯಾಗಿರುವ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.



Join Whatsapp