ಕಾರ್ಕಳ: ಕೆಲಸದ ಒತ್ತಡದಿಂದ ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

Prasthutha|

ಕಾರ್ಕಳ: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಪಂಚಾಯತ್ ವಸತಿಗೃಹದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕಂದೂರು ಬಳಿ ನಡೆದಿದೆ.

- Advertisement -


ಕಾರ್ಕಳ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಶ್ಮಿತಾ (26) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.


ಕಾರ್ಕಳದ ಪೆರ್ವಾಜೆಯವರಾದ ಅವಿವಾಹಿತೆ ಸುಶ್ಮಿತಾ ಹುಡ್ಕೋ ಭಾನುವಾರ ಕಾಲನಿಯ ಮನೆಯಲ್ಲಿ ತಂದೆ-ತಾಯಿ ಸಹೋದರನೊಂದಿಗೆ ವಾಸವಾಗಿದ್ದು, ಕಳೆದ ಆರು ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಕರ್ತವ್ಯದ ಒತ್ತಡದಿಂದ ಇದ್ದು, ಈ ಬಗ್ಗೆ ವೈದ್ಯರಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು ಎಂದು ತಿಳಿದುಬಂದಿದೆ.

- Advertisement -


ಸುಶ್ಮಿತಾ ಜು.24ರ ರಾತ್ರಿ ಊಟ ಮಾಡಿ ಮಲಗಿದ್ದು, 11ಗಂಟೆ ಸುಮಾರಿಗೆ ಕಾಣಿಸದೇ ಇದ್ದಾಗ ಸ್ನೇಹಿತರು ಹುಡುಕಾಡಿದಾಗ ವಸತಿಗೃಹದ ಬಾವಿ ಕಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿತ್ತು. ಬಳಿಕ ಅಗ್ನಿಶಾಮಕ ದಳದವರು ಬಂದು ಹುಡುಕಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version