ವಿಧಾನಸಭಾ ಚುನಾವಣೆ| ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಣೆ

Prasthutha|

ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

- Advertisement -

ಡಿಎಸ್​ಪಿ ದರ್ಜೆ ಮತ್ತು ಮೇಲ್ಮಟ್ಟದ ಅಧಿಕಾರಿಗಳಿಗೆ 7000 ರೂ. ಪೊಲೀಸ್ ಇನ್ಸ್ಪೆಕ್ಟರ್​ಗಳಿಗೆ 700 ರೂ. ಪಿಎಸ್​ಐ, ಎಎಸ್​ಐ, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ ಟೇಬಲ್​ಗಳಿಗೆ 500 ರೂ. ಹೋಮ್ ಗಾರ್ಡ್ಸ್, ಫಾರೆಸ್ಟ್ ಗಾರ್ಡ್ಸ್, ಗ್ರಾಮ ರಕ್ಷಕ ದಳ, ಎಸ್​ಸಿಸಿ ಕೆಡೆಟ್ಸ್ , ಎಕ್ಸ್ ಆರ್ಮಿ 350 ರೂ. ಭತ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಏ.13 ರಿಂದ ಪ್ರಾರಂಭವಾಗಿದ್ದು ಏಪ್ರಿಲ್​ 20ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Join Whatsapp