ಕರ್ನಾಟಕ ಬಂದ್: 60 ವಿಮಾನ ರದ್ದು

Prasthutha|

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಈ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.

- Advertisement -

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

Join Whatsapp