ಡಿ. 31ಕ್ಕೆ ಕರ್ನಾಟಕ ಬಂದ್

Prasthutha|

ಬೆಂಗಳೂರು: ಎಂಇಎಸ್​ ದಬ್ಬಾಳಿಕೆ, ದೌರ್ಜನ್ಯ ಖಂಡಿಸಿ ಕನ್ನಡಪರ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್ ​ಗೆ ಕರೆ ನೀಡಿವೆ.

- Advertisement -

ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಇರಲಿದ್ದು, ಬೆಂಗಳೂರು ಟೌನ್ ಹಾಲ್​ ನಿಂದ ಕನ್ನಡಿಗರ ಶಕ್ತಿ ಪ್ರದರ್ಶನಗೊಳ್ಳಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ​ ಮಾಡಿದ್ದಾರೆ.

ಇಲ್ಲಿ ಯಾವುದೇ ನೈತಿಕ ಬೆಂಬಲ ಅನ್ನೋದು ಬೇಡ. ಎಲ್ಲರೂ ಒಟ್ಟಾಗಿ ಕರ್ನಾಟಕ ಬಂದ್‌ ಗೆ ಬೆಂಬಲಿಸಬೇಕು. ಇಡೀ ರಾಜ್ಯವೇ ಒಂದಾಗಬೇಕು. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

Join Whatsapp