ಡಿ.5ರಂದು ಅಖಂಡ ಕರ್ನಾಟಕ ಬಂದ್ ಶತಸಿದ್ಧ : ವಾಟಾಳ್ ನಾಗರಾಜ್ ಘೋಷಣೆ

Prasthutha|

ಬೆಂಗಳೂರು : ಬೀದರ್ ನಿಂದ ಚಾಮರಾಜನಗರದ ವರೆಗೆ, ಮಂಗಳೂರಿನಿಂದ ಕೋಲಾರದ ವರೆಗೂ ಡಿ.5ರಂದು ಕರ್ನಾಟಕ ಬಂದ್ ನಡೆಯುವುದು ಶತಸಿದ್ಧ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂದ್ ನೂರಕ್ಕೆ ನೂರು ಯಶಸ್ವಿ ಖಚಿತ ಎಂದಿದ್ದಾರೆ.

- Advertisement -

ಇದು ಯಾರದ್ದೋ ಮನೆ ಉದ್ದಾರಕ್ಕಾಗಿ ಮಾಡುತ್ತಿರುವ ಹೋರಾಟವಲ್ಲ. ಸಮಗ್ರ ಕರ್ನಾಟಕ ಹಾಗೂ ಪ್ರತಿಯೊಬ್ಬ ಕನ್ನಡಿಗರಿಗಾಗಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ನಾಳೆಯಿಂದಲೇ ಹೋರಾಟ ತೀವ್ರಗೊಳ್ಳಲಿದೆ. ಡಿ.1ರಮದು ವಿಜಯಪುರಕ್ಕೆ ಸುಮಾರು 10,000 ಹೋರಾಟಗಾರರು ತೆರಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವ ರಾಜ್ಯ ಬಿಜೆಪಿ ಸರಕಾರದ ನಿರ್ಧಾರವನ್ನು ಖಂಡಿಸಿ, ಕನ್ನಡಪರ ಹೋರಾಟಗಾರರು ಈ ಹೋರಾಟ ಸಂಯೋಜಿಸುತ್ತಿದ್ದಾರೆ.  

Join Whatsapp