ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ ಜನತೆಯ ಬೇಡಿಕೆಗೆ ಸ್ಪಂದಿಸಿದಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಪ್ರಸ್ತಾವಿತ ಕರಡು ತಿದ್ದುಪಡಿಯು ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ಧವಾಗಿರದೆ ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ.

ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಮ್ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ.

- Advertisement -

ಈ ಕುರಿತು ಸೂಕ್ತ ನಿರ್ಧಾರಕ್ಕೆ ಬಂದು ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.

ಶೋಕ್ ಅವರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು

Join Whatsapp