10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

Prasthutha|

ಬೆಂಗಳೂರು: ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಮೊಹಮ್ಮದ್ ಮೊಹ್ಸಿನ್ ಅವರನ್ನು ಕಾರ್ಮಿಕ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ, ಟಿಹೆಚ್​ಎಂ ಕುಮಾರ್ ಅವರನ್ನು ಕೆಎಸ್​ಎಸ್​ಐಡಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ, ಆರ್.ಸ್ನೇಹಲ್ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ದೇಶಕರನ್ನಾಗಿ, ಪ್ರಭುಲಿಂಗ್ ಕವಲಿಕಟ್ಟಿ ಅವರನ್ನು ಪಶುಸಂಗೋಪನಾ ಇಲಾಖೆ ಆಯುಕ್ತರನ್ನಾಗಿ, ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು KUIDFC ಜಂಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ, ಪಾಂಡೆ ರಾಹುಲ್ ತುಕಾರಾಮ್ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಎಸ್.ಜೆ.ಸೋಮಶೇಖರ್ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಎಸ್.ರಾಜಪ್ಪ ಅವರನ್ನು ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಿಭಾಗದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Join Whatsapp