ಕೋವಿಡ್ ಸೋಂಕು ಏರಿಕೆ ಹಿನ್ನೆಲೆ : ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

Prasthutha|

ಬೆಂಗಳೂರು; ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು, ಈ ಕುರಿತು ಜಾಗೃತಿ ವಹಿಸುವ ಸಲುವಾಗಿ  ಕರ್ನಾಟಕ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

- Advertisement -

ಸಾರ್ವಜನಿಕರು  ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಠಾಗಿ ಪಾಲಿಸಬೇಕು ಮತ್ತು ಶಿಕ್ಷಣ ಸಂಸ್ಥೆಗಳು , ಕಛೇರಿಗಳು, ಮಾಲ್ , ಹೊಟೇಲ್ , ರೆಸ್ಟೋರೆಂಟ್ , ಪಬ್ ಗಳಲ್ಲಿ ,ಕಾರ್ಖನೆ ಮತ್ತು ಹಾಸ್ಟೆಲ್ ಗಳಲ್ಲಿ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿದ್ದು, ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸ್ವಂತ ವಾಹನ ಮತ್ತು ಬಸ್ , ರೈಲು ಮುಂತಾದ ಸಾರ್ವಜನಿಕ ವಾಹನಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರು ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದೆ. ಆರೋಗ್ಯ ಸಮಸ್ಯೆಯಿದ್ದವರು ಆದ್ಯತೆಯ ಮೇರೆಗೆ ಕೋವಿಡ್ ಪರೀಕ್ಷೆಯನ್ನು ಮಾಡಬೇಕು. ಅರ್ಹ ಜನರು ಬೂಸ್ಟರ್ ಲಸಿಕೆಯನ್ನು ಪಡೆಯಬೇಕೆಂದೂ ತಿಳಿಸಿದೆ.

Join Whatsapp