ಕರ್ನಾಟಕ–ಮಹಾರಾಷ್ಟ್ರ ಮುಖ್ಯಮಂತ್ರಿಗಳ ಗಡಿ ಮಾತುಕತೆ ಬಹಿರಂಗವಾಗಲಿ: ಅಜಿತ್‌ ಪವಾರ್‌

Prasthutha|

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ನಡೆಸಿರುವ ಮಾತುಕತೆಯನ್ನು ಬಹಿರಂಗಪಡಿಸಬೇಕು ಎಂದು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಆಗ್ರಹಿಸಿದ್ದಾರೆ.

- Advertisement -

‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಗಡಿ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಅದನ್ನು ಬಹಿರಂಗಪಡಿಸಬೇಕು. ರಾಜ್ಯ (ಮಹಾರಾಷ್ಟ್ರ) ಸರ್ಕಾರವು ಗಡಿ ಸಮಸ್ಯೆಗಳ ಕುರಿತು ಪ್ರಸ್ತಾವನೆಗಳನ್ನು ತಂದರೆ ನಾವು ಅದನ್ನು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

‘ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಹಲವು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ‘ಸಂಯುಕ್ತ ಮಹಾರಾಷ್ಟ್ರ’ದ ಕನಸು ನನಸಾಗಬೇಕಿದೆ. ಮಹಾರಾಷ್ಟ್ರವನ್ನು ಉಳಿಸಬೇಕಿದ್ದರೆ ರಾಜ್ಯಪಾಲರನ್ನು ವಜಾ ಮಾಡಬೇಕು ಎಂದು ಪವಾರ್ ಕೇಳಿಕೊಂಡಿದ್ದಾರೆ.

Join Whatsapp