ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಖ್ಯಾತ ಕಲಾವಿದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಈ ವರೆಗೆ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದ್ದು, 2009ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಪುನೀತ್ ರಾಜ್ ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು ಎಂದು ತಿಳಿಸಿದರು.

- Advertisement -

ಪುನೀತ್ ರಾಜ್ ಕುಮಾರ್ ಅವರು ನಿಜವಾದ ಕರ್ನಾಟಕ ರತ್ನ

ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಭಾಷೆ ಸಂಸ್ಕೃತಿಗೆ ಪುನೀತ್ ರಾಜ್ ಕುಮಾರ್ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ . ತಮ್ಮ ಜೀವಮಾನದಲ್ಲಿ ದೊಡ್ಡ ಸಾಧನೆಯನ್ನು ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ಅವರು ನಿಜವಾದ ಕರ್ನಾಟಕ ರತ್ನ. ಅವರು ಸದಾಕಾಲ ಯುವಜನರಿಗೆ ಪ್ರೇರಣೆಯಾಗಿರಬೇಕು ಎಂಬ ಮಹಾದಾಸೆಯಿಂದ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಮಾರಂಭವನ್ನ ನವೆಂಬರ್ 1ರಂದು ಸಂಜೆ 5 ಗಂಟೆಗೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಆಯೋಜಿಸಲಾಗುವುದು ವಿಶೇಷ ಮುಖ್ಯ ಅತಿಥಿಗಳು, ಶ್ರೇಷ್ಠ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು, ಶಾಸಕರು, ಹಿರಿಯ ಸಾಧಕರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಅರ್ಥಪೂರ್ಣವಾದ ಕಾರ್ಯಕ್ರಮವಾಗಿರಲಿದೆ ಎಂದರು.

ಬೆಂಗಳೂರಿನ ವಿವಿಧ ಕಡೆ ಪುನೀತ್ ರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಗಳು

ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂಬ ಅಭಿಮಾನಿಗಳ ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನವೆಂಬರ್ 1 ರ ನಂತರ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಒಟ್ಟು 3 ಕಾರ್ಯಕ್ರಮಗಳನ್ನು ಸುಮಾರು10 ದಿನಗಳ ಕಾಲ ಆಯೋಜಿಸಲಾಗುವುದು ಎಂದು ತಿಳಿಸಿದರು.



Join Whatsapp