ದಾನಿಗಳ ಸಹಕಾರದಿಂದ ಮಕ್ಕಳಿಗೆ ಪುಸ್ತಕ ವಿತರಿಸಿದ ಕರವೇ

Prasthutha|

ಕೊಡಗು: ದಾನಿಗಳ ಸಹಕಾರದಿಂದ ಕರ್ನಾಟಕ ರಕ್ಷಣಾ ವೇದಿಕೆಯು ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ 35 ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಪರಿಕರಗಳನ್ನು ವಿತರಿಸಿದರು.

- Advertisement -

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ 35 ಮಕ್ಕಳಿಗೆ  ದಾನಿಗಳಾದ ಅಬ್ದುಲ್ ಮೇಸ್ತ್ರಿ ರವರು ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಕಂಪಾಸ್ ಮತ್ತು ಪೆನ್ನು ಮತ್ತು ಪೆನ್ಸಿಲ್  ವಿತರಿಸಿದರು.

ಈ ಸಂದರ್ಭದಲ್ಲಿ ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಗಣಪತಿ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆಯು ಉತ್ತಮವಾದ ಜನಪರ ಕೆಲಸಗಳು ಮಾಡಿಕೊಂಡು ಬರುತ್ತಿದ್ದಾರೆ.  ಹಾಗೆಯೇ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ.  ಇವತ್ತು ನಮ್ಮ ಶಾಲೆಗೆ ಉಚಿತ ಬರೆಯುವ ಪುಸ್ತಕಗಳನ್ನು ದಾನಿಗಳು  ವಿತರಣೆ ಮಾಡುತ್ತಿದ್ದಾರೆ.  ಹಾಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಅವರಿಗೆ ಹಾಗೂ ದಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು  ಎಂದು ಹೇಳಿದರು

- Advertisement -

ಇನ್ನೂ  ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಕಾರ್ಯದರ್ಶಿ ರಾಮನಹಳ್ಳಿ  ಪ್ರವೀಣ್ ಅವರು ಮಾತನಾಡಿ, ಪ್ರತಿ  ವರ್ಷದಂತೆ ಕನ್ನಡ ಶಾಲೆಗಳ ಉಳಿವಿಗಾಗಿ ಬಡ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಪುಸ್ತಕಗಳ ವಿತರಣೆ ಮಾಡುತ್ತೇವೆ.  ದಾನಿಗಳ ಸಹಕಾರದೊಂದಿಗೆ ಪ್ರತಿ ವರ್ಷ ನಮಗೆ ಸಹಕಾರ ನೀಡುವ ದಾನಿಗಳಾದ ಅಬ್ದುಲ್ ಮೇಸ್ತ್ರಿ ಅವರಿಗೆ ಧನ್ಯವಾದ ಅರ್ಪಿಸಿದರು.

 ಇದೇ ಸಂದರ್ಭದಲ್ಲಿ ಪುಸ್ತಕ ದಾನಿಗಳಾದ ಅಬ್ದುಲ್ ಮೇಸ್ತ್ರಿ  ಅವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸಹ ಶಿಕ್ಷಕರು  ಸೇರಿ ದಾನಿಗಳಿಗೆ ಸನ್ಮಾನಿಸಿದರು.



Join Whatsapp