ಕಾರವಾರ: ಆಟವಾಡುತ್ತಾ ಬಾವಿಗೆ ಬಿದ್ದು ಮಗು ಮೃತ್ಯು

Prasthutha|

ಕಾರವಾರ: ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ನಡೆದಿದೆ.

- Advertisement -

ಸ್ಥುಥಿ (3) ಮೃತ ಮಗು.


ಮನೆಯ ಬಳಿ ಆಟವಾಡುತ್ತಿದ್ದ ಸ್ಥುಥಿ, ಗಣಪತಿ ಮೂರ್ತಿ ಎಂದು ಮಣ್ಣನ್ನು ಬಾವಿಯಲ್ಲಿ ಹಾಕಲು ಮುಂದಾಗಿದ್ದಾಳೆ. ಈ ವೇಳೆ ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ.

- Advertisement -


ಇತ್ತ ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದೆ ಇದ್ದಾಗ ಗಾಬರಿಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ, ಎಲ್ಲಿ ಹುಡುಕಿದರೂ ಕಾಣಿಸಲಿಲ್ಲ. ಬಡಾವಣೆಯ ನಿವಾಸಿಗಳೆಲ್ಲ ಹುಡುಕಾಡುವಾಗ ಕೊನೆಗೆ ಬಾವಿಯೊಳಗೆ ಇಣುಕಿ ನೋಡಿದ್ದಾರೆ. ಆಗ ಬಾವಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.



Join Whatsapp