ಕಾರವಾರ | ಕಾಳಿ ಸೇತುವೆ ಕುಸಿತ : ಓರ್ವ ಲಾರಿ ಚಾಲಕನ ರಕ್ಷಣೆ

Prasthutha|

- Advertisement -

ಶೋಧಕಾರ್ಯ ಮುಂದುವರಿಕೆ

ಕಾರವಾರ: ಕಾರವಾರದ ಕಾಳಿ ನದಿಗೆ ಕಟ್ಟಿರುವ ಹಳೆಯ ಸೇತುವೆ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕುಸಿದಿದೆ.

- Advertisement -

ಪರಿಣಾಮ ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್​ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಬೇರೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆಯೂ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ಮುಂದುವರೆದಿದೆ ಎಂದು ನಾರಾಯಣ ತಿಳಿಸಿದ್ದಾರೆ. ಅಬ್ಬರದ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.



Join Whatsapp