ಕಾಸರಗೋಡು | ಟ್ಯಾಂಕರ್ ನಿಂದ ಅನಿಲ ಸೋರಿಕೆ: ಸುತ್ತಮುತ್ತಲಿನ ಕುಟುಂಬಗಳ ಸ್ಥಳಾಂತರ

Prasthutha|

ಕಾಸರಗೋಡು: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಸರಗೋಡಿನ ಚಿತ್ತಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದ್ದು , ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ.

- Advertisement -

ಸುತ್ತಲಿನ ಸುಮಾರು 500ಮೀಟರ್ ನಷ್ಟು ದೂರದ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಈ ರಸ್ತೆಯ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋರಿಕೆ ಕಂಡು ಬಂದ ಹಿನ್ನೆಲೆ ಕೂಡಲೇ ಚಾಲಕ ಟ್ಯಾಂಕರ್ ನಿಲುಗಡೆ ಗೊಳಿಸಿ ಕಂಪೆನಿ ಅಧಿಕಾರಿಗಳಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಮಂಗಳೂರಿನಿಂದ ಕೋಝಿಕ್ಕೋಡ್ ಗೆ ತೆರಳುತ್ತಿತ್ತು ಎನ್ನಲಾಗಿದೆ.

Join Whatsapp
Exit mobile version