Home ಟಾಪ್ ಸುದ್ದಿಗಳು ಕಾಸರಗೋಡು | ಧ್ವಜ ಇಳಿಸುವ ವೇಳೆ ವಿದ್ಯುತ್ ಶಾಕ್: ಚರ್ಚ್ ಪಾದ್ರಿ ಮೃತ್ಯು

ಕಾಸರಗೋಡು | ಧ್ವಜ ಇಳಿಸುವ ವೇಳೆ ವಿದ್ಯುತ್ ಶಾಕ್: ಚರ್ಚ್ ಪಾದ್ರಿ ಮೃತ್ಯು

ಕಾಸರಗೋಡು: ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚರ್ಚ್ ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಕಾಸರಗೋಡಿನ ಮುಳ್ಳೇರಿಯದಲ್ಲಿ ನಡೆದಿದೆ.


ಮುಳ್ಳೇರಿಯ ಇನ್ ಫೆಂಟ್ ಜೀಸಸ್ ಚರ್ಚ್ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಮೃತರು.


ಸಂಜೆ ಧ್ವಜ ಇಳಿಸುವ ವೇಳೆ ಕಂಬಕ್ಕೆ ಸಿಕ್ಕಿಹಾಕಿಕೊಂಡಿದ್ದ ಧ್ವಜವನ್ನು ಬಿಡಿಸಲು ಪಾದ್ರಿಗೆ ಸಾಧ್ಯವಾಗದ ಕಾರಣ, ಕಂಬವನ್ನು ಎತ್ತಲು ಪ್ರಯತ್ನಿಸಿದ್ದಾರೆ. ಅದರ ತೂಕದಿಂದಾಗಿ ಒಂದು ಬದಿಗೆ ವಾಲಿದಾಗ ಹತ್ತಿರದ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿದ್ದು, ಅವರಿಗೂ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಕುಡಿಲಿಲ್ ಒಂದೂವರೆ ವರ್ಷದ ಹಿಂದೆ ಚರ್ಚ್ ನ ವಿಕಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

Join Whatsapp
Exit mobile version