ತಾಯಿ ಬಿಟ್ಟು ಹೋದರೂ ಕಾವೇರಿ ಹೋಗಲ್ಲ: ದುನಿಯಾ ವಿಜಯ್

Prasthutha|

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುತ್ತಿರುವ ನಡೆಯನ್ನು ಖಂಡಿಸಿ, ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಲವು ದಿನಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ದುನಿಯಾ ವಿಜಯ್ ತಾಯಿ ಬಿಟ್ಟು ಹೋದರೂ ಕಾವೇರಿ ಹೋಗಲ್ಲ ಎಂದು ಹೇಳಿದ್ದಾರೆ.


ಈ ಬಗ್ಗೆ ಎಕ್ಸ್ ನಲ್ಲೂ ಬರೆದುಕೊಂಡಿರುವ ವಿಜಯ್, “ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು. ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ. ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ. ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ. ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ” ಎಂದು ಕೇಳಿಕೊಂಡಿದ್ದಾರೆ.



Join Whatsapp
Exit mobile version