ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

Prasthutha|

ತೆಲಂಗಾಣ: ಎಡಗೈನಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದು ಚಂದ್ರಶೇಖರ್ ಹೃದಯದಲ್ಲಿ ಯಾವುದೇ ಬ್ಲಾಕ್ಗಳು ಕಂಡುಬಂದಿಲ್ಲ ಎಂದು ವರದಿಯಾಗಿದೆ.

- Advertisement -


ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿಯ ವೈಯಕ್ತಿಕ ಡಾಕ್ಟರ್ ಎಂ.ವಿ.ರಾವ್ ಇನ್ನು ಕೆಲವೇ ಹೊತ್ತಲ್ಲಿ ಕೆಸಿಆರ್ ಗೆ ಸಿಟಿ ಸ್ಕ್ಯಾನ್ ಮತ್ತು ಎಂಆರ್ ಐ ಸ್ಕ್ಯಾನ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ . ಕಳೆದ ಫೆಬ್ರವರಿಯಲ್ಲಿ ಸಿಎಂ ಕೆಸಿಆರ್ ಅವರ ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನು ಮಾಡಿದ್ದೇವೆ. ಇದೀಗ ಅವರ ಎಡ ಕೈ ಮತ್ತು ಕಾಲುಗಳಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ ಹೀಗಾಗಿ ಇನ್ನಷ್ಟು ತಪಾಸಣೆಯ ಅಗತ್ಯವಿದೆ ಎಂದಿದ್ದಾರೆ.

ಕೆಸಿಆರ್ ಆಸ್ಪತ್ರೆಗೆ ದಾಖಲಾದ ಕುರಿತು ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ಚಂದ್ರಶೇಖರ್ ರಾವ್ ಇಂದು ಯಾದಾದ್ರಿ ದೇವಾಲಯಕ್ಕೆ ಭೇಟಿ ಕೊಡಬೇಕಿತ್ತು, ಆದರೆ ಸ್ವಲ್ಪ ಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅದನ್ನು ರದ್ದುಗೊಳಿಸಿ ಯಶೋದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಡಗೈಯಲ್ಲಿ ತೀವ್ರ ನೋವಿರುವ ಕಾರಣ ವೈದ್ಯರು ಹೃದಯಕ್ಕೆ ಸಂಬಂಧಪಟ್ಟ ಪರೀಕ್ಷೆಗಳನ್ನೂ ನಡೆಸುತ್ತಿದ್ದಾರೆ ಎಂದು ಮಾಹಿತಿಯಲ್ಲಿ ತಿಳಿಸಿದೆ.

Join Whatsapp