ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟ ಕೆಸಿಆರ್: ಟಿಆರ್ ಎಸ್ ಇನ್ನು ಮುಂದೆ ಬಿಆರ್ ಎಸ್

Prasthutha|

ಹೈದರಾಬಾದ್ : ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮರುನಾಮಕರಣ ಮಾಡಿದ್ದಾರೆ.

- Advertisement -

ಹೈದರಾಬಾದ್ ನ ಪಕ್ಷದ ಕೇಂದ್ರ ಕಚೇರಿ ತೆಲಂಗಾಣ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮರುನಾಮಕರಣದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ, ಕೆಸಿಆರ್ ಪರ ಘೋಷಣೆ ಕೂಗಿ ಸಂಭ್ರಮ ಆಚರಿಸಿದರು. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲು ಕೆಸಿಆರ್ ಸಜ್ಜಾಗಿದ್ದಾರೆ.

ಟಿಆರ್ ಎಸ್ ಇನ್ನು ಮುಂದೆ ಬಿಆರ್ ಎಸ್ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

- Advertisement -

ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ 20 ಶಾಸಕರೊಂದಿಗೆ ಟಿಆರ್ ಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

Join Whatsapp