ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ

Prasthutha|

ರುದ್ರಪ್ರಯಾಗ: ಕೇದಾರನಾಥ ಮಾರ್ಗದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಮೃತರನ್ನು ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಎಂದು ಗುರುತಿಸಲಾಗಿದೆ.
ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ.


ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7.20ರ ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು.



Join Whatsapp
Exit mobile version