ಜೈಲು ಪಾಲಾಗಿರುವ ಮನೀಶ್ ಸಿಸೋಡಿಯಾ ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್

Prasthutha|

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸ್ಥಿತಿಯನ್ನು ನೆನೆದು ಕಣ್ಣೀರಿಟ್ಟ ಘಟನೆ ಬುಧವಾರ ನಡೆದಿದೆ.

- Advertisement -

ಬವಾನಾದಲ್ಲಿ ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಸ್ಪೆಶಲೈಸ್ಡ್ ಎಕ್ಸಲೆನ್ಸ್ ನ ಹೊಸ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಿಸೋಡಿಯಾ ಅವರು ಮಾಡಿದ ಕಾರ್ಯಗಳನ್ನು ನೆನೆದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾವುಕರಾಗಿದ್ದಾರೆ.

‘ನಾನಿಂದು ಮನೀಶ್ ಸಿಸೋಡಿಯಾ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮನೀಶ್ ಸಿಸೋಡಿಯಾ ಇದನ್ನು ಆರಂಭಿಸಿದ್ದರು. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ಅನ್ಯಾಯದ ರೀತಿಯಲ್ಲಿ ಜೈಲಿಗಟ್ಟಿದರು’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Join Whatsapp