ED ಸಮನ್ಸ್‌ ಧಿಕ್ಕರಿಸಿದ ಕೇಜ್ರಿವಾಲ್: ಚುನಾವಣಾ ಸಭೆಯಲ್ಲಿ ಭಾಗಿ

Prasthutha|

ಸಿಂಗ್ರೌಲಿ: ED ಸಮನ್ಸ್ ಧಿಕ್ಕರಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಧ್ಯಪ್ರದೇಶದ ಸಿಂಗ್ರೌಲಿ ನಗರದಲ್ಲಿ ಚುನಾವಣಾ ಅಭ್ಯರ್ಥಿಯ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಜೊತೆಗೆ ಇದ್ದರು.

- Advertisement -

ಆಪ್ ನ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಇಂದು ದೆಹಲಿ ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ವಿಚಾರಣೆಗೆ ಇಡಿ ಮುಂದೆ ಹಾಜರಾಗಬೇಕಿತ್ತು. ಸಮನ್ಸ್ ರಾಜಕೀಯ ಪ್ರೇರಿತ ಮತ್ತು ಕಾನೂನುಬಾಹಿರ ಎಂದು ಪ್ರತಿಪಾದಿಸಿದ ಕೇಜ್ರಿವಾಲ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಏಜೆನ್ಸಿಗೆ ಪತ್ರ ಬರೆದಿದ್ದರು.

ವಿಚಾರಣೆಗೆ ಹಾಜರಾಗದೇ ದೆಹಲಿ ಸಿಎಂ ಮಾನ್ ಸಿಂಗ್ರೌಲಿಯಲ್ಲಿ ಪಕ್ಷದ ಅಭ್ಯರ್ಥಿ ಮತ್ತು ಎಎಪಿಯ ರಾಜ್ಯಾಧ್ಯಕ್ಷೆ ರಾಣಿ ಅಗರವಾಲ್‌ ಅವರ ಪವಾಗಿ ರೋಡ್‌ಶೋನಲ್ಲಿ ಭಾಗವಹಿದ್ದಾರೆ.

- Advertisement -

ರಾಣಿ ಅಗರವಾಲ್ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರವಾದ ಸಿಂಗ್ರೌಲಿ ನಗರದ ಮೇಯರ್ ಕೂಡ. ಕಳೆದ ವರ್ಷ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಾಬಲ್ಯವಿರುವ ರಾಜ್ಯದಲ್ಲಿ ಮೇಯರ್ ಚುನಾವಣೆಯಲ್ಲಿ ಗೆದ್ದು ಅಚ್ಚರಿ ಮೂಡಿಸಿದ್ದರು.

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದೆ.

Join Whatsapp