Home ಟಾಪ್ ಸುದ್ದಿಗಳು ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ತೆಲಂಗಾಣದ ಬಿಆರ್ ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ7ರವರೆಗೆ ವಿಸ್ತರಿಸಿ ಆದೇಶಿಸಿದೆ.


ಕೇಜ್ರಿವಾಲ್ ಮತ್ತು ಕವಿತಾ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ವಿಡಿಯೊ ಕಾನ್ಪರೆನ್ಸ್ ಮೂಲಕ ಈ ಇಬ್ಬರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಾದ ಪ್ರತಿವಾದ ಆಲಿಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಮೇ 7ರವರೆಗೆ ಇಬ್ಬರ ಬಂಧನದ ಅವಧಿ ವಿಸ್ತರಿಸಿದರು.

Join Whatsapp
Exit mobile version