ಜಾಮೀನು ಪಡೆದರೂ ಅಧಿಕಾರ ಚಲಾಯಿಸಲಾಗದ ಕೇಜ್ರಿವಾಲ್ ರಾಜೀನಾಮೆ ಕೊಡಲಿ: ಬಿಜೆಪಿ

Prasthutha|

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾಮೀನು ಷರತ್ತುಗಳ ಅನ್ವಯ ಯಾವುದೇ ಅಧಿಕಾರ ಚಲಾಯಿಸುವಂತಿಲ್ಲ. ಹೀಗಾಗಿ, ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದೆಹಲಿ ಬಿಜೆಪಿ ಆಗ್ರಹಿಸಿದೆ.

- Advertisement -


ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಇಂದು ಸುಪ್ರೀಂ ಕೋರಟ್, ಕೇಜ್ರಿವಾಲ್ ಗೆ ಜಾಮೀನು ನೀಡಿದೆ. ಇ.ಡಿ ಪ್ರಕರಣದಲ್ಲಿ ವಿಧಿಸಲಾಗಿರುವ ಜಾಮೀನು ಷರತ್ತುಗಳೇ ಸಿಬಿಐ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.


ಕೇಜ್ರಿವಾಲ್ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಆದರೆ. ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -


ಸುಪ್ರೀಂ ಕೋರ್ಟ್ ಷರತ್ತುಗಳ ಅನ್ವಯ ಅಧಿಕಾರ ಚಲಾಯಿಸಲಾಗದು. ಹಾಗಾಗಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಸಚ್ ದೇವ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಅವರನ್ನು ಬಂಧಿಸಿರುವುದು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದೂ ಅವರು ಹೇಳಿದ್ದಾರೆ.



Join Whatsapp
Exit mobile version