ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋ ಹಾಕುವಂತೆ ಪ್ರಧಾನಿಗೆ ಕೇಜ್ರಿವಾಲ್ ಮನವಿ

Prasthutha|

ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಭಾರತದ ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಸೇರಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಭಾರತೀಯ ಕರೆನ್ಸಿಯ ಮೇಲೆ ಒಂದು ಬದಿಯಲ್ಲಿ ಗಾಂಧೀಜಿಯವರ ಭಾವಚಿತ್ರವಿದೆ. ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರವನ್ನು ಹಾಕಬೇಕೆಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದರು.

ಇಂಡೋನೇಷ್ಯಾದ 20,000 ರೂಪಾಯಿ ನೋಟಿನ ಮೇಲೆ ಗಣೇಶನ ಫೋಟೋ ಇದೆ.  ಇಂಡೋನೇಷ್ಯಾ ಅದನ್ನು ಮಾಡಲು ಸಾಧ್ಯವಾದರೆ, ನಾವೂ ಕೂಡ ಯಾಕೆ ಮಾಡಬಾರದು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಪರಿಹರಿಸುವ ಪ್ರಯತ್ನಗಳ ಹೊರತಾಗಿ ನಮಗೆ ಸರ್ವಶಕ್ತನ ಆಶೀರ್ವಾದ ಬೇಕು. ಆದ್ದರಿಂದ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡುವುದಾಗಿ ಅವರು ತಿಳಿಸಿದರು ಅಕ್ಟೋಬರ್ 14 ರಂದು ಕೊನೆಯ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು ಎರಡು ವರ್ಷಗಳ ಕನಿಷ್ಠ ಮಟ್ಟವಾದ 528.367 ಬಿಲಿಯನ್ ಡಾಲರ್ ಗೆ ಕುಸಿದಿದೆ, ಇದು ಹಿಂದಿನ ವಾರಕ್ಕಿಂತ 4.5 ಬಿಲಿಯನ್ ಡಾಲರ್ ಕಡಿಮೆಯಾಗಿದೆ

Join Whatsapp