ನೋಟುಗಳ ಮೇಲೆ ದೇವರ ಚಿತ್ರ: ಪ್ರಧಾನಿಗೆ ಮನವಿ ಬಳಿಕ ಪತ್ರ ಬರೆದ ಕೇಜ್ರಿವಾಲ್

Prasthutha|

ನವದೆಹಲಿ: ಭಾರತದ ಕರೆನ್ಸಿಯಲ್ಲಿ  ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಅಳವಡಿಸುವಂತೆ ಮನವಿ ಮಾಡುವ ಮೂಲಕ ಗದ್ದಲ ಸೃಷ್ಟಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್,  ತಮ್ಮ ಬೇಡಿಕೆ  ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಪತ್ರದಲ್ಲಿ,  ಭಾರತೀಯ ಕರೆನ್ಸಿಯ ಒಂದು ಬದಿಯಲ್ಲಿ ಗಾಂಧೀಜಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮೀ ಅವರ ಚಿತ್ರ ಇರಬೇಕು ಎಂದು ದೇಶದ 130 ಕೋಟಿ ಜನರು ಬಯಸುತ್ತಾರೆ . ಇದರ ಬಗ್ಗೆ ಅಪಾರವಾದ ಬೆಂಬಲ ವ್ಯಕ್ತವಾಗಿದೆ. ಜನರಲ್ಲಿ ಭಾರೀ ಉತ್ಸಾಹವಿದೆ ಮತ್ತು ಎಲ್ಲರೂ ಇದನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. 

ಭಾರತದ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತಕ್ಕೆ ತಲುಪಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯದ ಹೊರತಾಗಿಯೂ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿದೆ ಎಂದು ಅರವಿಂದ್ ಕೇಜ್ರಿವಾಲ್  ಹೇಳಿದ್ದಾರೆ.

- Advertisement -

ಭಾರತದ ಆರ್ಥಿಕತೆಯನ್ನು ಸುಧಾರಿಸಲು ನೋಟುಗಳ ಮೇಲೆ ದೇವರುಗಳ ಚಿತ್ರ ಮುದ್ರಿಸುವಂತೆ ಕೇಜ್ರಿವಾಲ್ ಬುಧವಾರ ಹೇಳಿಕೆ ನೀಡಿದ್ದರು.

Join Whatsapp