ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

Prasthutha|

ಶಿವಮೊಗ್ಗ: ಕೋವಿಡ್ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದರು.

- Advertisement -


ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.


ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್ ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.



Join Whatsapp
Exit mobile version