ಲಂಚ ಪ್ರಕರಣ: ವಿಚಾರಣೆಗೆ ಹಾಜರಾದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್

Prasthutha|

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನಾಮಪತ್ರವನ್ನು ಹಿಂಪಡೆಯಲು ಬಿಎಸ್ಪಿ ಅಭ್ಯರ್ಥಿಗೆ 2.5 ಲಕ್ಷ ರೂಪಾಯಿ ಲಂಚ ನೀಡಿದ ಪ್ರಕರಣದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

ಕಾಸರಗೋಡು ಜಿಲ್ಲಾ ಕ್ರೈಮ್ ಬ್ರಾಂಚ್ ಪ್ರಧಾನ ಕಚೇರಿಯಲ್ಲಿ ಡಿವೈಎಸ್ಪಿ ಎ ಸತೀಶ್ ಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಆರಂಭವಾಯಿತು. ಬಿಎಸ್ಪಿ ಅಭ್ಯರ್ಥಿ ಕೆ ಸುಂದರ ಅವರ ಹೇಳಿಕೆಯ ಪ್ರಕಾರ, ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಂಜೇಶ್ವರದಲ್ಲಿ ಸ್ಪರ್ಧಿಸಿದ್ದ ಕೆ.ಸುರೇಂದ್ರನ್ ಹೆಸರನ್ನು ಹೋಲುವ ಕೆ.ಸುಂದರ ಅವರ ನಾಮಪತ್ರವನ್ನು ಹಿಂಪಡೆದರೆ 15 ಲಕ್ಷ ರೂ. ಹಾಗೂ ಕರ್ನಾಟಕದಲ್ಲಿ ವೈನ್ ಶಾಪ್ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು.

Join Whatsapp