Home ಟಾಪ್ ಸುದ್ದಿಗಳು ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಕೋರ್ಟಿಗೆ ಹಾಜರು

ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಕೋರ್ಟಿಗೆ ಹಾಜರು

ಕಾಸರಗೋಡು: ಕಳೆದ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ನಾಮಪತ್ರ ಹಿಂಪಡೆಯುವಂತೆ ಒತ್ತಡ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮತ್ತೆ ಆರಂಭವಾಗಿದೆ. ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ. ಬಾಲಕೃಷ್ಣ ಶೆಟ್ಟಿ, ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್‌ ನಾಯ್ಕ, ಮಣಿಕಂಠ ರೈ, ಲೋಕೇಶ್‌ ವಿಚಾರಣಾ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ. ನ್ಯಾಯಾಲಯ ಎಲ್ಲರಿಗೂ ಜಾಮೀನು ನೀಡಿದೆ.

Join Whatsapp
Exit mobile version