ಕೇರಳ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ

Prasthutha|

ಕೊಚ್ಚಿ: ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

- Advertisement -

ಸ್ಫೋಟದಲ್ಲಿ ಗಂಭೀರವಾಗಿ ಯಗೊಂಡಿದ್ದ ಸಲ್ಲಿ ಪ್ರದೀಪನ್‌ ಎಂಬವರು ಕಳೆದ ರಾತ್ರಿ ಮೃತಪಟ್ಟಿದ್ದಾರೆ ಎಂದು ಸರಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಫೋಟದ ಪರಿಣಾಮ ಗಾಯಗೊಂಡಿದ್ದ 17 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಎಂಟು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಒಂಬತ್ತು ಮಂದಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಅ.29ರಂದು ಕಲಮಶ್ಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಸರಣಿ ಸ್ಫೋಟ ಸಂಭವಿಸಿದ್ದು, ಕೃತ್ಯ ಎಸಗಿದ ವ್ಯಕ್ತಿ ವಿಕೃತ ಸಮರ್ಥನೆಯೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ.

Join Whatsapp