Home ಟಾಪ್ ಸುದ್ದಿಗಳು ಕೇರಳ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಕೇರಳ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಕೊಚ್ಚಿ: ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

ಸ್ಫೋಟದಲ್ಲಿ ಗಂಭೀರವಾಗಿ ಯಗೊಂಡಿದ್ದ ಸಲ್ಲಿ ಪ್ರದೀಪನ್‌ ಎಂಬವರು ಕಳೆದ ರಾತ್ರಿ ಮೃತಪಟ್ಟಿದ್ದಾರೆ ಎಂದು ಸರಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ಫೋಟದ ಪರಿಣಾಮ ಗಾಯಗೊಂಡಿದ್ದ 17 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಎಂಟು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಒಂಬತ್ತು ಮಂದಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅ.29ರಂದು ಕಲಮಶ್ಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಸರಣಿ ಸ್ಫೋಟ ಸಂಭವಿಸಿದ್ದು, ಕೃತ್ಯ ಎಸಗಿದ ವ್ಯಕ್ತಿ ವಿಕೃತ ಸಮರ್ಥನೆಯೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ.

Join Whatsapp
Exit mobile version