ಕೇರಳ ಸ್ಫೋಟ: ದೆಹಲಿಯಲ್ಲಿ ಹೈ ಅಲರ್ಟ್, ಹಲವು ರಾಜ್ಯಗಳಲ್ಲಿಯೂ ಬಿಗಿ ಪೊಲೀಸ್ ಭದ್ರತೆ

Prasthutha|

ನವದೆಹಲಿ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ ಇಂದು ಬೆಳಿಗ್ಗೆ ನಡೆದ ಸ್ಫೋಟದ  ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾದ ಬೆನ್ನಿಗೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಮುಖ ಮಾರುಕಟ್ಟೆಗಳು, ಚರ್ಚ್‌ಗಳು, ಮೆಟ್ರೊ ನಿಲ್ದಾಣ, ಬಸ್ ನಿಲ್ದಾಣ, ರೈಲು ನಿಲ್ದಾಣಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾದ ಮಾಹಿತಿ ಬಂದಿದೆ.

- Advertisement -

ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಸಿವಿಲ್ ಡ್ರೆಸ್ ಮತ್ತು ಪಿಸಿಆರ್‌ನಲ್ಲಿರುವ ಪೊಲೀಸರು ಜಾಗರೂಕರಾಗಿರಲು ತಿಳಿಸಲಾಗಿದೆ. ಜತೆಗೆ, ಅವರಿಗೆ ಬರುವ ಯಾವುದೇ ಮಾಹಿತಿಯನ್ನು ನಿರ್ಲಕ್ಷಿಸದಂತೆ ಸೂಚಿಸಲಾಗಿದೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp