ಕೇರಳ ಬೋಟ್ ದುರಂತ| ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆ!

Prasthutha|

ಮಲಪ್ಪುರಂ: ಜಿಲ್ಲೆಯ ತಾನೂರ್‌ನಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

- Advertisement -

ದೋಣಿಯಲ್ಲಿ 40ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮೃತರಲ್ಲಿ ಆರು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ ಎಂಬುದು ಪ್ರಾಥಮಿಕ ಮಾಹಿತಿ.

- Advertisement -

ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವ ಸ್ಥಳವಾಗಿರುವುದರಿಂದ 20 ಜನರು ಪ್ರಯಾಣಿಸಬಹುದಾದ ಬೋಟ್‌ನಲ್ಲಿ ಸುಮಾರು 40 ಜನರನ್ನು ಹತ್ತಿಸಿರುವುದು ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಭಾನುವಾರದ ಕೊನೆಯ ಟ್ರಿಪ್ ಆಗಿದ್ದರಿಂದ ಬಾಕಿ ಉಳಿದವರನ್ನು ಕೂಡ ಬೋಟ್‌ಗೆ ಹತ್ತಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Join Whatsapp