“ಅರ್ಜುನ್ ಪತ್ತೆ ಮಾಡಲು ಕಾರ್ಯಾಚರಣೆ ಮುಂದುವರೆಸಿ”: ಸಿದ್ದರಾಮಯ್ಯಗೆ ಪತ್ರ ಬರೆದ ಕೇರಳ ಸಿಎಂ

Prasthutha|

- Advertisement -

ತಿರುವನಂತಪುರಂ: ಕಳೆದ ತಿಂಗಳು ಅಂಕೋಲದ ಶಿರೂರಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿ ಚಾಲಕನ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಅರ್ಜುನ್ ಬಹಳ ದಿನಗಳಿಂದ ನಾಪತ್ತೆಯಾಗಿರುವುದರಿಂದ ಅವರ ಕುಟುಂಬದ ಸದಸ್ಯರ ಆತಂಕ ಮತ್ತು ದುಃಖವನ್ನು ಹಂಚಿಕೊಳ್ಳಲು ನಾನು ಪತ್ರವನ್ನು ಬರೆಯುತ್ತಿದ್ದೇನೆ. ಅರ್ಜುನ್ ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಇಂದು ಪುನರಾರಂಭಿಸಲಾಗುವುದು ಎಂದು ನನಗೆ ತಿಳಿದಿತ್ತು. ಆದರೆ ಕಾರ್ಯಾಚರಣೆ ಇನ್ನೂ ಪುನರಾರಂಭಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗುತ್ತಿದೆ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

ಶೋಧ ಕಾರ್ಯಾಚರಣೆ ಪುನರಾರಂಭಿಸಲು ಕೇರಳ ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ಮಧ್ಯಸ್ಥಿಕೆ ಕೋರಿದ್ದಾರೆ. ಇದಕ್ಕೂ ಮುನ್ನ ವಿಜಯನ್ ಅವರು ಅರ್ಜುನ್ ಮನೆಗೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಯಾವುದೇ ತೊಂದರೆಗಳಿದ್ದರೂ ಅವರ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿ ಧೈರ್ಯ ತುಂಬಿದರು.



Join Whatsapp