ಕೇರಳದ ಶಿಕ್ಷಣ ಸಚಿವರಿಂದ ರಾಜ್ಯ ಶಿಕ್ಷಣ ಸಚಿವರ ಭೇಟಿ: ವಿವಿಧ ವಿಷಯಗಳ ಕುರಿತು ವಿಚಾರ ವಿನಿಮಯ

Prasthutha|


ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಕೇರಳದ ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಚಿವರಾದ ಶಿವನ್ ಕುಟ್ಟಿ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದರು.

- Advertisement -


ವಿಧಾನಸೌಧದ ಕಚೇರಿಯಲ್ಲಿ ನಡೆದ ಭೇಟಿ ವೇಳೆ ಎರಡೂ ರಾಜ್ಯಗಳ ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಶಾಲೆಗಳು, ಕೊಠಡಿ ಮತ್ತು ಮೂಲಸೌಕರ್ಯಗಳು, ಶಿಕ್ಷಣದ ಗುಣಮಟ್ಟ, ಸ್ಮಾರ್ಟ್ ಕ್ಲಾಸ್, ಆನ್-ಲೈನ್ ಕ್ಲಾಸ್, ಶಿಕ್ಷಕರು, ಪರೀಕ್ಷಾ ಪದ್ಧತಿ, ನೇಮಕಾತಿ, ಮಧ್ಯಾಹ್ನದ ಬಿಸಿಯೂಟ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಚಿವರು ವಿಚಾರ ವಿನಿಮಯ ಮಾಡಿಕೊಂಡರು.


ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಆರ್. ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಹಾಗೂ ಕೇರಳ ರಾಜ್ಯದ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಜೀವನ್ ಬಾಬು ಸೇರಿದಂತೆ ಇನ್ನಿತರ ಅಧಿಕಾರಿಗಳು ಚರ್ಚೆ ವೇಳೆ ಉಪಸ್ಥಿತರಿದ್ದರು.

Join Whatsapp